image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಆಶಾ ಕಾರ್ಯಕರ್ತೆಯರಿಗೆ ತ್ರೈಮಾಸಿಕ ಗೌರವಧನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ.

ಆಶಾ ಕಾರ್ಯಕರ್ತೆಯರಿಗೆ ತ್ರೈಮಾಸಿಕ ಗೌರವಧನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ.

ಬೆಂಗಳೂರು: ಆಶಾ ಕಾರ್ಯಕರ್ತರಿಗೆ ಗೌರವಧನ ಪಾವತಿಸಲು ರಾಜ್ಯ ಸರ್ಕಾರ ತ್ರೈ ಮಾಸಿಕ ಕಂತನ್ನು ಬಿಡುಗಡೆ ಮಾಡಿದೆ. 2025-26ನೇ ಸಾಲಿನಲ್ಲಿ 41 ಸಾವಿರ ಆಶಾ ಕಾರ್ಯಕರ್ತರಿಗೆ ಮಾಸಿಕ ಗೌರವಧನಕ್ಕಾಗಿ ಪ್ರತಿ ತಿಂಗಳು 5 ಸಾವಿರದಂತೆ, ಒಟ್ಟು 246 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಅದರಲ್ಲಿ ಅಕ್ಟೋಬರ್‍ನಿಂದ ಡಿಸೆಂಬರ್ ವರೆಗಿನ ತ್ರೈ ಮಾಸಿಕ ಕಂತಿನ 61.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ಆಶಾ ಕಾರ್ಯಕರ್ತರ ಗೌರವಧನ ಪಾವತಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು. ಅನ್ಯ ಉದ್ದೇಶಗಳಿಗೆ ಬಳಸಬಾರದು ಎಂಬ ಷರತ್ತಿಗೊಳಪಟ್ಟು ಹಣ ಬಿಡುಗಡೆ ಮಾಡಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Category
ಕರಾವಳಿ ತರಂಗಿಣಿ