image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಸ್ತೆ ಗುಂಡಿ ಮುಚ್ಚುವ ಬದಲು ಕಿರಣ್ ಮಜುಂದಾರ್ ರನ್ನು ಟೀಕಿಸುವುದು ಸೂಕ್ತವೇ : ಹೆಚ್ ಡಿ ಕೆ

ರಸ್ತೆ ಗುಂಡಿ ಮುಚ್ಚುವ ಬದಲು ಕಿರಣ್ ಮಜುಂದಾರ್ ರನ್ನು ಟೀಕಿಸುವುದು ಸೂಕ್ತವೇ : ಹೆಚ್ ಡಿ ಕೆ

ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದರು. ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಯೋಕಾನಾ ಮುಖ್ಯಸ್ಥೆ ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ ಎಂದು ಪ್ರಶ್ನಿಸಿದರು. ವಾಸ್ತವಾಂಶವನ್ನು ಮಾಧ್ಯಮಗಳೇ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಉದ್ಯಮಿನ್ನು ಟೀಕಿಸುವುದರಲ್ಲಿ ಈ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕೆಲಸ ಮಾಡುವುದು ಬಿಟ್ಟು ಕ್ಷುಲ್ಲಕ ವಿಚಾರಗಳ ಮೇಲೆ ಗಮನವಿಟ್ಟು ಸಮಯ ಪೋಲು ಮಾಡುತ್ತಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಿದ ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರ ಟ್ವೀಟ್ ಗೆ ಈ ಸರ್ಕಾರ ಪ್ರತಿ ಟೀಕೆ ಮಾಡುತ್ತಿರುವುದು ಸರಿಯಲ್ಲ. ಒಂದು ಸರ್ಕಾರದ ವರ್ತನೆ ಇರಬೇಕಾದದ್ದು ಹೀಗಲ್ಲ ಎಂದು ಸಚಿವರು ಹೇಳಿದರು. ರಸ್ತೆಗುಂಡಿಗಳಿಂದಾಗಿ ಸಾಕಷ್ಟು ಬೆಂಗಳೂರಿನಲ್ಲಿ ಜನರಿಗೆ ಬಹಳ ತೊಂದರೆ ಆಗಿದೆ. ನಾನು ಸಿಎಂ ಆಗಿದ್ದಾಗ ನನ್ನ ಕಾಲದ ಎರಡೂ ಅವಧಿಯಲ್ಲೂ ಗುಂಡಿಗಳ ಬಗ್ಗೆ ಯಾವ ಉದ್ಯಮಿಗಳೂ ಟೀಕೆ ಮಾಡಲಿಲ್ಲ. 2006-07ರಲ್ಲಿ 59 ರಸ್ತೆಗಳ ಅಗಲೀಕರಣಕ್ಕೆ ಮಂಜೂರಾತಿ ನೀಡಿ ಐದಾರು ತಿಂಗಳಲ್ಲೇ ಮುಗಿಸಲಾಗಿತ್ತು. ಇವರಿಗೆ ಕೆಲಸ ಮಾಡಲು ಏನು ಅಡ್ಡಿ ಎಂದು ಅವರು ಖಾರವಾಗಿ ಪ್ರಶ್ನಿಸಿದರು. ಈಗ ದಿನವೂ ಆರ್‌ಎಸ್‌ಎಸ್.. ಆರ್‌ಎಸ್‌ಎಸ್.. ಎಂದು ಜಪ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ. ಇದು ಆರ್‌ಎಸ್‌ಎಸ್ ಬಗ್ಗೆ ಚರ್ಚೆ ಮಾಡುವ ಸಂದರ್ಭವೇ? ರಾಜ್ಯದಲ್ಲಿ ಎಷ್ಟೊಂದು ಸಮಸ್ಯೆಗಳಿವೆ, ಅವುಗಳನ್ನು ನಿವಾರಿಸುವುದು ಬಿಟ್ಟು ಒಂದು ಸಂಘಟನೆ ವಿರುದ್ಧ ಚರ್ಚಿಸುತ್ತಿದ್ದರೆ ಉಪಯೋಗ ಏನು? ಎಂದು ಸಚಿವರು ಕೇಳಿದರು.

Category
ಕರಾವಳಿ ತರಂಗಿಣಿ