ಬೆಂಗಳೂರು : ಬೆಂಗಳೂರಿನ ಡೇರಿ ಸರ್ಕಲ್ ಬಳಿ ಹಾಡಹಗಲೇ ನಡೆದ 7.11 ಕೋಟಿ ಹಣ ದಡೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಭಾಗಿಯಾದ ಸಿಬ್ಬಂದಿಗಳಿಗೆ 5 ಲಕ್ಷ ರೂ ಬಹುಮಾನ ನೀಡಲಾಗುತ್ತದೆ ಎಂದು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರು ಪೊಲೀಸರು ಯಶಸ್ವಿಯಾಗಿ ಪ್ರಕರಣ ಬೇಧಿಸಿದ್ದಾರೆ. ಸೋಮವಾರ ಅವರನ್ನ ಅಭಿನಂದಿಸುತ್ತೇವೆ. ತನಿಖೆಯಲ್ಲಿ ಭಾಗಿಯಾದ ಸಿಬ್ಬಂದಿಗಳಿಗೆ 5 ಲಕ್ಷ ರೂ ಬಹುಮಾನ ನೀಡಲಾಗುತ್ತದೆ ಎಂದು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಘಟನೆ ನಡೆದ 54 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 5.76 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದರು. ಒಟ್ಟು 8 ಜನರಿಂದ ದರೋಡೆ ಕೃತ್ಯ ನಡೆದಿದೆ ಎಂದು ಹೇಳಿದರು. ದರೋಡೆಕೋರರು ಹಲವು ವಾಅಹನಗಳನ್ನು ಬಳಸಿದ್ದಾರೆ. ಪದೇ ಪದೇ ನಂಬರ್ ಪ್ಲೇಟ್ ಬದಲಾವಣೆ ಮಾಡಿದ್ದಾರೆ. ಹಣ ಕದ್ದೊಯ್ದ ವಾಹನವನ್ನು ಹಿಡಿಯಲು ಸಾಧ್ಯವಾಗಿಲ್ಲ. ಆರೋಪಿಗಳು ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಿ ತನಿಖೆ ದಾರಿ ತಪ್ಪಿಸುತ್ತಿದ್ದರು. ದರೋಡೆ ಪ್ರಕರಣ ಬೇಧಿಸಲು ಒಟ್ಟು 11 ತಂಡಗಳಲ್ಲಿ 200 ಪೊಲೀಸರು ಕಾರ್ಯಾಚರಣೆ ನಡೆಸಿದ್ದರು ಎಂದು ಮಾಹಿತಿ ನೀಡಿದರು.