image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಗಾಳಿಪೂಜೆಯ ಶ್ರೀ ಬಬ್ಬುಸ್ವಾಮಿ ದೇವಾಲಯದ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಟಿ. ರವಿ ಅವರಿಂದ ಅನುದಾನದ ಚೆಕ್ ಹಸ್ತಾಂತರ

ಗಾಳಿಪೂಜೆಯ ಶ್ರೀ ಬಬ್ಬುಸ್ವಾಮಿ ದೇವಾಲಯದ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಟಿ. ರವಿ ಅವರಿಂದ ಅನುದಾನದ ಚೆಕ್ ಹಸ್ತಾಂತರ

ಚಿಕ್ಕಮಗಳೂರು: ತಾಲ್ಲೂಕಿನ ತೊಗರಿಹಂಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಪೂಜೆ ಗ್ರಾಮದಲ್ಲಿರುವ ಶ್ರೀ ಬಬ್ಬುಸ್ವಾಮಿ ದೇವಾಲಯದ ಮುಂದುವರಿದ ನಿರ್ಮಾಣ ಕಾಮಗಾರಿಗಾಗಿ ವಿಧಾನ ಪರಿಷತ್ ಶಾಸಕರಾದ ಡಾ. ಸಿ.ಟಿ. ರವಿ ಅವರು ಅನುದಾನದ ಚೆಕ್ಕನ್ನು ಹಸ್ತಾಂತರಿಸಿದ್ದಾರೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಈ ಅನುದಾನವನ್ನು ಒದಗಿಸಲಾಗಿದ್ದು, ಭಾನುವಾರ ನಡೆದ ಕಾರ್ಯಕ್ರಮದಲ್ಲಿ ದೇವಾಲಯದ ಸಮಿತಿಯ ಸದಸ್ಯರಿಗೆ ಶಾಸಕರು ಅಧಿಕೃತವಾಗಿ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರ ಕಚೇರಿಯ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ