image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಾಧನಾ ಸಮಾವೇಶದ ದಿನಾಂಕದಲ್ಲಿ ದಿಢೀರ್ ಬದಲಾವಣೆ: ಮೇ 19ಕ್ಕೇ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆ

ಸಾಧನಾ ಸಮಾವೇಶದ ದಿನಾಂಕದಲ್ಲಿ ದಿಢೀರ್ ಬದಲಾವಣೆ: ಮೇ 19ಕ್ಕೇ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆ

ಬೆಂಗಳೂರು : ​ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರ ಹಮ್ಮಿಕೊಂಡಿರುವ ಬಹುನಿರೀಕ್ಷಿತ 'ಸಾಧನಾ ಸಮಾವೇಶ'ದ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ನಿಗದಿಯಾಗಿದ್ದ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿಯೇ ಈ ಸಮಾವೇಶವನ್ನು ನಡೆಸಲು ಸದ್ಯ ತೀರ್ಮಾನಿಸಲಾಗಿದೆ. ಅಧಿಕೃತ ಮೂಲಗಳ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸುವ ಉದ್ದೇಶದ ಈ ಸಮಾವೇಶವು ಮೇ 20 ರಂದು ನಡೆಯಬೇಕಾಗಿತ್ತು. ಆದರೆ, ಇದೀಗ ಪರಿಷ್ಕೃತ ವೇಳಾಪಟ್ಟಿಯಂತೆ ಮೇ 19 ರಂದೇ ಸಾಧನಾ ಸಮಾವೇಶವನ್ನು ಅತ್ಯಂತ ಅದ್ಧೂರಿಯಾಗಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

​ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಸೂಚನೆಯ ಮೇರೆಗೆ ಈ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆಡಳಿತಾತ್ಮಕ ಕಾರಣಗಳು ಹಾಗೂ ಸಮಾವೇಶದ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದು ದಿನ ಮುಂಚಿತವಾಗಿಯೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಧಿಕಾರಿಗಳು ಹಾಗೂ ಪಕ್ಷದ ಪ್ರಮುಖರಿಗೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ಈವರೆಗೆ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಹತ್ತಾರು ಜನಕಲ್ಯಾಣ ಕಾರ್ಯಕ್ರಮಗಳು, ಅಭಿವೃದ್ಧಿ ಯೋಜನೆಗಳ ಯಶೋಗಾಥೆಯನ್ನು ಈ ಸಮಾವೇಶದಲ್ಲಿ ಜನಾಂದೋಲನದ ರೂಪದಲ್ಲಿ ಬಿಂಬಿಸಲು ಸರ್ಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

Category
ಕರಾವಳಿ ತರಂಗಿಣಿ