image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನೀಟ್ ಪ್ರತಿಭಟನೆ ರಾಜಕೀಯ ಅರಾಜಕತೆಯ ಷಡ್ಯಂತ್ರ: ಸಿ.ಟಿ. ರವಿ ಆರೋಪ

ನೀಟ್ ಪ್ರತಿಭಟನೆ ರಾಜಕೀಯ ಅರಾಜಕತೆಯ ಷಡ್ಯಂತ್ರ: ಸಿ.ಟಿ. ರವಿ ಆರೋಪ

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ನೆಪವಾಗಿಟ್ಟುಕೊಂಡು ದೇಶದಲ್ಲಿ ರಾಜಕೀಯ ಅಸ್ಥಿರತೆ ಹಾಗೂ ಅರಾಜಕತೆ ಸೃಷ್ಟಿಸಲು ಸಂಘಟಿತ "ಟೂಲ್‌ಕಿಟ್" ಷಡ್ಯಂತ್ರ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೀಟ್ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ನಡೆಯುತ್ತಿಲ್ಲ. ಮೇ 3ರಂದು ಪ್ರಶ್ನೆಪತ್ರಿಕೆ ಸೋರಿಕೆಯಾದ ತಕ್ಷಣವೇ ಸರ್ಕಾರ ಪ್ರಕರಣ ದಾಖಲಿಸಿ 13 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅವರು ಜೈಲಿನಲ್ಲಿದ್ದಾರೆ. ತರುವಾಯ ಜೂನ್ 21ರಂದು ಮರುಪರೀಕ್ಷೆ ನಡೆಸಿ, ಜುಲೈ 16ರಂದು ಫಲಿತಾಂಶವನ್ನೂ ಪ್ರಕಟಿಸಲಾಗಿದೆ. ಇಷ್ಟಾದರೂ ನೀಟ್‌ಗೆ ಸಂಬಂಧವಿಲ್ಲದ 370ನೇ ವಿಧಿ ಹಾಗೂ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಕುರಿತು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಮುಂದುವರಿಸಿರುವುದು ರಾಜಕೀಯ ಅಸ್ಥಿರತೆ ಸೃಷ್ಟಿಸುವ ಪ್ರಯತ್ನವಾಗಿದೆ ಎಂದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಕಚೇರಿ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಶಾಸಕ ಹರೀಶ್ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ದಾಳಿಯು ಕಾಂಗ್ರೆಸ್‌ನ ಗೂಂಡಾಗಿರಿ ಸಂಸ್ಕೃತಿಯನ್ನು ಬಯಲಿಗೆಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಕೋರುವ ಕಾಂಗ್ರೆಸ್, ರಾಜ್ಯದಲ್ಲಿ ಕೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೇಮಕಾತಿ ಅಕ್ರಮಗಳು ನಡೆದಾಗ ಮುಖ್ಯಮಂತ್ರಿಗಳ ರಾಜೀನಾಮೆಯನ್ನು ಏಕೆ ಕೇಳಲಿಲ್ಲ ಎಂದು ಪ್ರಶ್ನಿಸಿದರು. ರಾಜ್ಯದ ಜನತೆ ಇಂತಹ ಗೂಂಡಾ ರಾಜಕಾರಣಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.

Category
ಕರಾವಳಿ ತರಂಗಿಣಿ