image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

“ಒಲವಿನ ಪಯಣ” ಪೆ. 21ಕ್ಕೆ ರಾಜ್ಯಾದ್ಯಂತ ಬಿಡುಗಡೆ...

“ಒಲವಿನ ಪಯಣ” ಪೆ. 21ಕ್ಕೆ ರಾಜ್ಯಾದ್ಯಂತ ಬಿಡುಗಡೆ...

ಮಂಗಳೂರು: “ಒಲವಿನ ಪಯಣ" ಒಂದು ಹಳ್ಳಿಯ ಮಧ್ಯಮವರ್ಗದ ಕುಟುಂಬದ ಯುವಕನ ಬದುಕಿನ ಪಯಣದ ಕಥೆ. ಗೊತ್ತು ಗುರಿಯಿಲ್ಲದೆ ಪ್ರೀತಿ ಪ್ರೇಮ ಎಂದು ಓಡಾಡುತ್ತಿರುವ ಹುಡುಗನೊಬ್ಬ ತಾನು ಪ್ರೀತಿಸಿದ ಶ್ರೀಮಂತ ಹುಡುಗಿಯನ್ನು ಬಾಳಸಂಗಾತಿಯಾಗಿ ಪಡೆಯಲು ಅವಳ ತಂದೆಗೆ ಸವಾಲು ಹಾಕಿ ಕೊನೆಗೆ ಆ ಸವಾಲನ್ನು ಗೆದ್ದು ಮದುವೆಯಾಗಿ ಸುಖವಾಗಿ ಜೀವನ ಸಾಗಿಸಬೇಕೆನ್ನುವಾಗ ಅವನ ಜೀವನದಲ್ಲಿ ವಿಧಿಯಾಟದಿಂದ ನಡೆಯುವ ತಿರುವುಗಳನ್ನು ಹೊಂದಿದೆ.

”ಒಲವಿನ ಪಯಣ ಸಿನಿಮಾ ಫೆ.21ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಫ್ಯಾಮಿಲಿ ಒರಿಯೆಂಟೆಡ್ ಸಿನಿಮಾ ಇದಾಗಿದ್ದು ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುವ ಎಲ್ಲ ಅಂಶಗಳು ಸಿನಿಮಾದಲ್ಲಿ ಇರಲಿವೆ“ ಎಂದು ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ದೇಶಕ ಕಿಶನ್ ಬಲ್ನಾಡ್  ಹೇಳಿದರು. ಮುಳಗುಂದ ಕ್ರಿಯೇಷನ್ಸ್ ಅಡಿಯಲ್ಲಿ ನಾಗರಾಜ್ ಎಸ್ ಮುಳಗುಂದ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಛಾಯಗ್ರಾಹಕರಾಗಿ ಜೀವನ್ ಗೌಡ, ಸಂಕಲನ  ಕೀರ್ತಿರಾಜ್ ಸಂಗೀತ ಸಾಯಿ ಸರ್ವೇಶ್, ನಾಯಕನಾಗಿ ಸುನೀಲ್ ಅಭಿನಯಿಸಿದರೆ, ಖುಷಿ, ಪ್ರಿಯ ಹೆಗ್ಡೆ ನಾಯಕಿಯರಾಗಿ ಅಬಿನಯಿಸಿದ್ದಾರೆ. ಪೊಷಕ ಕಲಾವಿದರಾದ ಪದ್ಮಜಾ ರಾವ್, ಬಲ ರಾಜ್ವಾಡಿ, ನಾಗೇಶ್ ಮಯ್ಯ, ಪೃಥ್ವಿರಾಜ್, ಸುಧಾಕರ್ ಬನ್ನಂಜೆ, ಸೂರ್ಯಕಿರಣ್, ಧನಂಜಯ್, ಸಮೀಕ್ಷಾ, ಬೇಬಿ ರಿಧಿ ನಟಿಸಿದ್ದಾರೆ ಎಂದರು. 

ನಾಯಕನಟ ಸುನಿಲ್ ಮಾತಾಡಿ, ”ಸಿನಿಮಾದಲ್ಲಿ ಒಳ್ಳೆಯ ಕಥಾ ಸಾರಾಂಶವಿದೆ. ಇಬ್ಬರು ನಾಯಕಿಯರಿದ್ದು ಇಬ್ಬರೂ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಸಿನಿಮಾ ಕತೆಯನ್ನು ಸಂಕ್ಷಿಪ್ತವಾಗಿ ಜನರ ಮುಂದಿಡುವ ಪ್ರಯತ್ನ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ“ ಎಂದರು.

Category
ಕರಾವಳಿ ತರಂಗಿಣಿ