image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

'ನೆತ್ತೆರೆಕೆರೆ' ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

'ನೆತ್ತೆರೆಕೆರೆ' ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್  ನಿರ್ಮಾಣದಲ್ಲಿ ತಯಾರಾದ "ನೆತ್ತೆರೆಕೆರೆ" ತುಳು ಸಿನಿಮಾ ಆಗೋಸ್ಟ್ 29 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ನೆತ್ತೆರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರೆಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ ಎಂದು ಚಿತ್ರದ ನಿರ್ದೇಶಕ ಸ್ವರಾಜ್ ಶೆಟ್ಟಿ ತಿಳಿಸಿದರು. ನಗರದ ಖಾಸಗಿ ಹೊಟೇಲಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.  ಚಿತ್ರಕತೆ , ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದೇನೆ ಎಂದರು.  ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ವಾರ್, ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ

ಸಿನಿಮಾದಲ್ಲಿ ಯುವ ಶೆಟ್ಟಿ   ಪುಷ್ಪರಾಜ್ ಬೊಳ್ಳೂರು, ಅನಿಲ್ ಉಪ್ಪಳ, ಭವ್ಯಾ ಪೂಜಾರಿ, ಪೃಥ್ವಿನ್ ಪೊಳಲಿ,  ಉತ್ಸವ್ ವಾಮಂಜೂರು, ನೀತ್ ಪೂಜಾರಿ, ವಿಜಯ ಮಯ್ಯ ಚಂದ್ರಶೇಖರ ಸಿದ್ದಕಟ್ಟೆ, ಮನೀಶ್ ಶೆಟ್ಟಿ ಉಪಿರ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು ಭಗವಾನ್, ಕೀರ್ತನ್ ಮುಲ್ಕಿ ಪಾತ್ರವರ್ಗದಲ್ಲಿ ಇದ್ದಾರೆ.

ಸಿನಿಮಾಕ್ಕೆ ಚಿತ್ರಕತೆ ನಿರ್ದೇಶನ ಸ್ವರಾಜ್ ಶೆಟ್ಟಿ, ಕ್ಯಾಮರಾ: ಉದಯ ಬಲ್ಲಾಳ್, ಸಂಗೀತ: ವಿನೋದ್ ರಾಜ್ ಕೋಕಿಲಾ, ಸಂಕಲನ: ಗಣೇಶ್ ನೀರ್ಚಾಲ್, ಸಾಹಸ: ಮಾಸ್ ಮಾದ, ಟೈಗರ್ ಶಿವ, ಎಕ್ಸಿಟಿವ್ ಪ್ರೊಡ್ಯುಸರ್ : ಯತೀಶ್ ಪೂಜಾರಿ, ಲೈನ್ ಪ್ರೊಡ್ಯುಸರ್: ವಿಜಯ ಮಯ್ಯ, ಪ್ರೊಡಕ್ಷನ್ ಮ್ಯಾನೇಜರ್: ರಾಜೇಶ್ ಕುಡ್ಲ, ನಿರ್ದೇಶನ ವಿಭಾಗದಲ್ಲಿ ಅವಿನಾಶ್ ಎಸ್ ಆಪ್ತ,  ನೀತ್ ಪೂಜಾರಿ, ಕಾರ್ತಿಕ್ ಜಯಚಂದ್ರನ್, ತುಳಸಿದಾಸ್ ಮಂಜೇಶ್ವರ್, ಮೇಕಪ್ :  ಚೇತನ್, ಆಟ್೯: ವಿಪಿನ್, 

ನೆತ್ತೆರೆಕೆರೆ  ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನೆತ್ತೆರೆಕೆರೆ ಸಿನಿಮಾ ತೆರೆ ಕಾಣಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಲಂಚುಲಾಲ್, ವಿತರಕ ಸಚಿನ್ ಉಪ್ಪಿನಂಗಡಿ, ನಾಯಕಿ ದಿಶಾಲಿ ಮತ್ತು ಸಂಗೀತ ನಿರ್ದೇಶಕ ವಿನೋದ್ ರಾಜ್ ಕೊಕಿಲ ಮುಂತಾದವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ