ಉಜಿರೆ : ತಮಿಳುನಾಡಿನ ರಾಣಿಪೇಟೆ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಶ್ರೀ ಸುಬ್ರಹ್ಮಣ್ಯ ಸ್ವಾಮೀಜಿಯವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಬಳಿಕ ಶ್ರೀ ಕ್ಷೇತ್ರದಲ್ಲಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದ ಸ್ವಾಮೀಜಿಯವರು, ನಂತರ ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯದತ್ತ ಪ್ರಯಾಣ ಬೆಳೆಸಿದರು.