image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ. ವಿಶೇಷ ಅನುದಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ. ವಿಶೇಷ ಅನುದಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ 10 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಒದಗಿಸುವಂತೆ ಕೋರಿ ಸುಳ್ಯ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಸಮಾಜ ಕಲ್ಯಾಣ ಇಲಾಖೆ ನೂತನ ಸಚಿವರಾದ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿಯಾಗಿ ಅಧಿಕೃತವಾಗಿ ಮನವಿ ಸಲ್ಲಿಸಿದರು.

ಇದೇ ವೇಳೆ, ಸುಳ್ಯ ಅಂಬೇಡ್ಕರ್ ಭವನದ ಅಂದಾಜು ಪಟ್ಟಿಯು ಸರ್ಕಾರಕ್ಕೆ ಸಲ್ಲಿಕೆಯಾಗಿ ಎರಡು ತಿಂಗಳು ಕಳೆದಿದ್ದರೂ ಇದುವರೆಗೆ ಅನುಮೋದನೆ ಸಿಕ್ಕಿಲ್ಲದಿರುವ ಬಗ್ಗೆ ಸಚಿವರ ಗಮನ ಸೆಳೆದರು. ಸಾರ್ವಜನಿಕರ ಅನುಕೂಲಕ್ಕಾಗಿ ಬಾಕಿ ಉಳಿದಿರುವ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಅವರು ಒತ್ತಾಯಿಸಿದರು.

ಶಾಸಕರ ಈ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನ ಮುಗಿದ ಕೂಡಲೇ ಕಡತವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Category
ಕರಾವಳಿ ತರಂಗಿಣಿ