image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರೊ. ಬಿ.ಎ. ವಿವೇಕ ರೈ ಅವರ ತುಳುವ ಜಾಲ ಪೊಲಿ ಹಾಗೂ ನಾಲಾಯಿಡ್ದ್ ನಾಲೂರುಗು ಕೃತಿಗಳು ಲೋಕಾರ್ಪಣೆ

ಪ್ರೊ. ಬಿ.ಎ. ವಿವೇಕ ರೈ ಅವರ ತುಳುವ ಜಾಲ ಪೊಲಿ ಹಾಗೂ ನಾಲಾಯಿಡ್ದ್ ನಾಲೂರುಗು ಕೃತಿಗಳು ಲೋಕಾರ್ಪಣೆ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರಿನ ತುಳು ಭವನದಲ್ಲಿ ಶನಿವಾರದಂದು ಆಯೋಜಿಸಲಾಗಿದ್ದ ಪ್ರೊ. ಬಿ.ಎ. ವಿವೇಕ ರೈ ಅವರ ತುಳು ಸಾಹಿತ್ಯ ಅವಲೋಕನ 'ಬೆನ್ನಿದ ಪನಿದೊಂಪ' ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ ಡಾ. ಪಾದೆಕಲ್ಲು ವಿಷ್ಣು ಭಟ್ ಅವರು ವಿವೇಕ ರೈ ಅವರ 'ತುಳುವ ಜಾಲ ಪೊಲಿ' ಮತ್ತು 'ನಾಲಾಯಿಡ್ದ್ ನಾಲೂರುಗು' ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ನಿವೃತ್ತ ಪ್ರಾಂಶುಪಾಲ ಹಾಗೂ ತುಳು ಅಕಾಡೆಮಿ ಮಾಜಿ ಸದಸ್ಯ ಗುಣಪಾಲ ಕಡಂಬ, ಅಕಾಡೆಮಿ ಸದಸ್ಯರಾದ ಅಕ್ಷಯ ಆರ್. ಶೆಟ್ಟಿ, ಬಾಬು ಕೊರಗ ಪಾಂಗಾಳ, ಉದ್ಯಾವರ ನಾಗೇಶ್ ಕುಮಾರ್, ಕುಂಬ್ರ ದುರ್ಗಾ ಪ್ರಸಾದ್ ರೈ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ