image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕುದ್ರೋಳಿ ಕ್ಷೇತ್ರದಲ್ಲಿ ಶಾರದಾ ಮೂರ್ತಿ ರಚನೆಗೆ ವಿಧ್ಯುಕ್ತ ಮುಹೂರ್ತ

ಕುದ್ರೋಳಿ ಕ್ಷೇತ್ರದಲ್ಲಿ ಶಾರದಾ ಮೂರ್ತಿ ರಚನೆಗೆ ವಿಧ್ಯುಕ್ತ ಮುಹೂರ್ತ

ಮಂಗಳೂರು: ಕರಾವಳಿಯ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯುವ ನವರಾತ್ರಿ ಮಹೋತ್ಸವದ ಹಿನ್ನೆಲೆಯಲ್ಲಿ, ಪೂಜಿಸಲ್ಪಡುವ ಶಾರದಾ ಮಾತೆಯ ಭವ್ಯ ಮೂರ್ತಿ ರಚನೆಗೆ ಗಣೇಶ ಚತುರ್ಥಿಯ ಪವಿತ್ರ ದಿನದಂದು ವಿಧ್ಯುಕ್ತವಾಗಿ ಮುಹೂರ್ತ ನೆರವೇರಿತು.

ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಶಾರದಾ ದೇವಿಯ ಮೂರ್ತಿ ನಿರ್ಮಾಣ ಕಾರ್ಯಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು. ಈ ಶುಭ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಜಯರಾಮ ಕಾರಂದೂರು, ಶ್ರೀ ಗೋಕರ್ಣನಾಥ ಸೇವಾದಳದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನವರಾತ್ರಿ ಉತ್ಸವಕ್ಕೆ ಸಿದ್ಧತೆಗಳು ಅಧಿಕೃತವಾಗಿ ಆರಂಭಗೊಂಡಿದ್ದು, ಭವ್ಯವಾದ ಶಾರದಾ ಮಾತೆಯ ಮೂರ್ತಿಯನ್ನು ಅತ್ಯಂತ ಶ್ರದ್ಧಾಭಕ್ತಿಗಳಿಂದ ಸಿದ್ಧಪಡಿಸಲಾಗುತ್ತಿದೆ.

Category
ಕರಾವಳಿ ತರಂಗಿಣಿ