ಬಂಟ್ವಾಳ: ಹೊಕ್ಕಾಡಿಗೋಳಿ ಮಹಿಷಮರ್ದಿನಿ ಕಂಬಳ ಸಮಿತಿ ಹಮ್ಮಿಕೊಂಡಿರುವ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಇಂದು ಚಾಲನೆ ನೀಡಲಾಯಿತು.
ಪೂಂಜ ಕ್ಷೇತ್ರದ ಕೃಷ್ಣಪ್ರಸಾದ್ ಆಚಾರ್ಯ ಕಂಬಳ ಕರೆ ಉದ್ಘಾಟಿಸಿ ಆಶೀರ್ವಚನ ನೀಡಿ, ತುಳುನಾಡಿನ ಕೃಷಿಕರ ಜಾನಪದ ಕ್ರೀಡೆ ಕಂಬಳ ನಿರಂತರವಾಗಿ ನಡೆಯಲು ಎಲ್ಲರ ಪ್ರೋತ್ಸಾಹ ಅಗತ್ಯ ಎಂದು ಅವರು ಹೇಳಿದರು. ಸಿದ್ಧಕಟ್ಟೆಯ ವೈದ್ಯ ಡಾ.ಸುದೀಪ್ ಕುಮಾರ್ ಜೈನ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ರಾಜ್ಯ ಭಾಲ ಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಭಟ್ ಉಪಸ್ಥಿತರಿದ್ದರು.