image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹಿಂದೂ ಮಹಾಸಭಾ ಪದಾಧಿಕಾರಿಗಳ ಆಯ್ಕೆ: ಮಂಗಳೂರಿನಲ್ಲಿ ಸರ್ವರ ಒಳಿತಿಗಾಗಿ ಮಹಾಯಾಗ

ಹಿಂದೂ ಮಹಾಸಭಾ ಪದಾಧಿಕಾರಿಗಳ ಆಯ್ಕೆ: ಮಂಗಳೂರಿನಲ್ಲಿ ಸರ್ವರ ಒಳಿತಿಗಾಗಿ ಮಹಾಯಾಗ

ಮಂಗಳೂರು: ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ತ್ರಿಚಂಡಿ ಮಹಾರಾಜ್ ಆಯ್ಕೆಯಾಗಿದ್ದು, ರಾಜ್ಯ ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಶೀಘ್ರದಲ್ಲಿ ಜಿಲ್ಲಾ ಸಮಿತಿ ರಚನೆ ಮಾಡಲಾಗುವುದು ಎಂದು ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಸರ್ವರ ಒಳಿತಿಗಾಗಿ ಮಂಗಳೂರಿನಲ್ಲಿ ಮಹಾಯಾಗ ಹಮ್ಮಿಕೊಳ್ಳಲು ಅಖಿಲ ಭಾರತ ಹಿಂದೂ ಮಹಾಸಭಾ ಯೋಚಿಸಿದೆ. ಮಂಗಳೂರು ಮತ್ತು ಬೆಂಗಳೂರಿನಲ್ಲಿ ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ರಾಜ್ಯ ಕಾರ್ಯದರ್ಶಿ ಪುನೀತ್ ಸುವರ್ಣ ಮಾತನಾಡಿ, ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಹಿಂದೂಗಳ ರಕ್ಷಣೆಗಾಗಿ ಇರುವ ಪಕ್ಷ ಅಖಿಲ ಭಾರತ ಹಿಂದೂ ಮಹಾಸಭಾ ಮಾತ್ರ. ಹಿಂದೂ ರಾಷ್ಟ್ರ ನಿರ್ಮಾಣ ನಮ್ಮ ಉದ್ದೇಶ ನಾಥೋರಾಮ್ ಗೋಡ್ಲೆ ನಮ್ಮ ಪಕ್ಷದವರು ಎಂದು ಈಗಾಗಲೇ ಒಪ್ಪಿಕೊಂಡಿದ್ದೇವೆ. ಬೇರೆ ಧರ್ಮಗಳ ಬಗ್ಗೆ ನಮಗೆ ದ್ವೇಷವಿಲ್ಲ, ಆದರೆ, ನಮ್ಮ ವಿರುದ್ಧ ಮಾತನಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದರು.

ಪತ್ರಿಕಾಗೋಷ್ಟಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಸುರೇಂದ್ರ ಬಾಬು ಬಿ.ಎಸ್., ಪ್ರಮುಖರಾದ ಮೋಹನ್ ಕುಮಾರ್, ಕೆ.ಕೆ.ದಿನೇಶ್, ಸೌಮ್ಯಾ ಆರ್, ಶಂಕ‌ರ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ