ಪುತ್ತೂರು: ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕು ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ವರದಿಯಾಗಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು ಮೌನೇಶ್ ಅವರಿಗೆ ಗಾಯಗಳಾಗಿದೆ.
ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಬೆಕ್ಕೊಂದು ಬಿದ್ದಿತ್ತು, ಬೆಕ್ಕು ಮೇಲೆ ಬರಲಾರದೆ ಬಾವಿಯಲ್ಲಿ ಸಿಕ್ಕಿ ಹಾಕಿಕೊಂಡ ಹಿನ್ನಲೆಯಲ್ಲಿ ಮನೆಯವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಬೆಕ್ಕಿನ ರಕ್ಷಣೆಗೆ ಅಗ್ನಿಶಾಮಕ ದಳ ತಂಡ ಆಗಮಿಸಿತ್ತು. ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಗೊಂಡಿದ್ದು, ಬೆಕ್ಕಿನ ರಕ್ಷಣೆಗೆ ಇಳಿದಿದ್ದ ಅಗ್ನಿಶಾಮಕ ದಳದ ತಂಡದವರು ಬಾವಿಯೊಳಗೆ ಇಳಿದಿದ್ದಾರೆ. ಈ ವೇಳೆ ಬೆಕ್ಕನ್ನ ಹಿಡಿಯಲು ಹೋದ ಅಗ್ನಿಶಾಮಕ ದಳ ತಂಡದ ಇಬ್ಬರ ಬೆಕ್ಕು ಆಟ್ಯಾಕ್ ಮಾಡಿದೆ. ಸರಿ ಸುಮಾರು ಏಳು ನಿಮಿಷಗಳ ಕಾಲ ಸಿಬ್ಬಂದಿಯ ಕೈಯನ್ನ ಕಚ್ಚಿ ಹಿಡಿದಿದ್ದ ಬೆಕ್ಕು, ಬೆಕ್ಕು ಕಚ್ಚಿದ ರೋಷಕ್ಕೆ ಬಿಡಿಸಲಾಗದೇ ಅಗ್ನಿಶಾಮಕದಳದ ಸಿಬ್ಬಂದಿ ಪರದಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸಿದ್ದರೂಢ ಮತ್ತು ಮೌನೇಶ್ ಅವರಿಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.