ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅಟ್ಲಿ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.
ನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿರುವರು.
ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅಟ್ಲಿ ಅವರನ್ನು ಶಾಲು ಹೊಂದಿಸಿ ಸ್ಮರಣೆಗೆ ನೀಡಿ ಗೌರವಿಸಿದರು. ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮರಾವ್ ಉಪಸ್ಥಿತರಿದ್ದರು.