ಮಂಗಳೂರು: ಅಪಾರ್ಟೆಂಟ್ ನಿಂದ ಬಿದ್ದು ಬಾಲಕ ಮೃತಪಟ್ಟ ಘಟನೆ ಮಂಗಳೂರಿನ ನಗರದ ಮೇರಿಹಿಲ್ ನಲ್ಲಿ ನಡೆದಿದೆ.ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಸಮರ್ಜಿತ್ (13) ಮೃತ ಬಾಲಕ. ಶನಿವಾರ ಮುಂಜಾನೆ ಸ್ನೇಹಿತರೊಂದಿಗೆ ವಸತಿ ಸಮುಚ್ಚಯದ ಮಹಡಿಗೆ ತೆರಳಿದ್ದು, ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.