image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಪಡು ಭಟ್ರಕೊಡಿ ಶ್ರೀ ಮರ್ಗಾಪರಮೇಶ್ವರೀ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ...

ನಾಳೆಯಿಂದ ಪಡು ಭಟ್ರಕೊಡಿ ಶ್ರೀ ಮರ್ಗಾಪರಮೇಶ್ವರೀ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ...

ಮಂಗಳೂರು: ನೀರುಮಾರ್ಗ ಸಮೀಪದ ಪಡು ಭಟ್ರಕೊಡಿ ಶ್ರೀ ಮರ್ಗಾಪರಮೇಶ್ವರೀ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಾ.27ರಂದು ಆರಂಭಗೊಂಡು ಮಾ.30ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಕುಡುಪು ಶ್ರೀ ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಯವರು ತಿಳಿಸಿದ್ದಾರೆ. ಅವರು ನಗರದ ಖಾಸಗಿ ಹೊಟೆಲಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ನೀಡಿ, ಮಾ.27ರಂದು ಬೆಳಗ್ಗೆ 8.00ರಿಂದ ಆಚಾರ್ಯಾದಿ ಋತ್ವಿಜರ ಆಗಮನ, ಸಾಮೂಹಿಕ ದೇವತಾ ಪ್ರಾರ್ಥನೆ, ಗಣಪತಿ ಹೋಮ. 11.00ರಿಂದ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಂಜೆ ಗಂಟೆ 6.00ರಿಂದ ಆಚಾರ್ಯಾದಿ ಋಗರಣ ಪ್ರಾಸಾದ ಶುದ್ದಿ, ರಕ್ಕೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಗಂಟೆ 7.30ರಿಂದ ಅನ್ನಸಂತರ್ಪಣೆ ನಡೆಯಲಿದೆ. ಮಾ.27ರಂದು ಸಂಜೆ ಗಂಟೆ 3ಕ್ಕೆ ನೀರುಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದಿಂದ, ಬೊಂಡಂತಿಲ ಕಲ್ಲುಡೇಲು  ಶ್ರೀ ಸದಾಶಿವ ದೇವಸ್ಥಾನದಿಂದ, ವಾಮಂಜೂರು ಶ್ರೀ ಅಮೃತೇಶ್ವರ ದೇವಸ್ಥಾನದಿಂದ, ಉಳಾಯಿಬೆಟ್ಟು ಸಾಲೆ ಶ್ರೀ ವಿಶ್ವನಾಥ ಮಹಾಗಣಪತಿ ದೇವಸ್ಥಾನ, ಪೆರ್ಮಂಕಿ ಶ್ರೀ ಸದಾಶಿವ ದೇವಸ್ಥಾನದಿಂದ, ಮಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಕಾಣಿಕೆ ಹೊರಟು ಪಡು ಬದಿನಡಿ ಶ್ರೀ ಅರಸು ಮುಂಡಿತ್ತಾಯ ಕ್ಷೇತ್ರದಲ್ಲಿ ಸೇರುವುದು. ಸಂಜೆ 4.00ಕ್ಕೆ ಬದಿನಡಿ ದೈವಸ್ಥಾನದಿಂದ ವೈಭವದ ಹಸಿರು ಹೊರೆಕಾಣಿಕೆ ಆರಂಭವಾಗಿ ಸಂಜೆ 5.30ಕ್ಕೆ ಪಡು ಭಟ್ರಕೋಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಆಗಮಿಸಲಿದೆ. ಮಾ.28ರಂದು ಪೂರ್ವಾಹ್ನ 6.00ರಿಂದ ಧಾರ್ಮಿಕ ಕಾರ್ಯಕ್ರಮಗಳು, ಚಂಡಿಕಾಯಾಗ ಆರಂಭ. ಮಧ್ಯಾಹ್ನ ಗಂಟೆ 12.00ಕ್ಕೆ ಚಂಡಿಕಾಯಾಗದ ಪೂರ್ಣಾಹುತಿ ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ ಗಂಟೆ 6.00ರಿಂದ ದುರ್ಗಾನಮಸ್ಕಾರ ಪೂಜೆ, ಧಾರ್ಮಿಕ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯಲಿದೆ. ಮಾ.29ರಂದು ಬೆಳಗ್ಗೆ 6.00ರಿಂದ ಧಾರ್ಮಿಕ ಕಾರ್ಯಕ್ರಮಗಳು, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 6.00ರಿಂದ ಧಾರ್ಮಿಕ ಕಾರ್ಯಕ್ರಮ, ರಾತ್ರಿ ಗಂಟೆ 7.30ರಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಮಾ.30ರಂದು ಬೆಳಗ್ಗೆ 8.30ರಿಂದ ಶ್ರೀ ದೇವರಿಗೆ ಕಲಶಾಭಿಷೇಕ ಪ್ರಾರಂಭವಾಗಲಿದ್ದು ಬೆಳಿಗ್ಗೆ 9.10ರಿಂದ ವೃಷಭ ಲಗ್ನ ಸುಮುಹೂರ್ತದಲ್ಲಿ 10.10ರ ಸಮಯ ಶ್ರೀ ದುರ್ಗಾಪರಮೇಶ್ವರೀ ದೇವರಿಗೆ “ಬ್ರಹ್ಮಕಲಶಾಭಿಷೇಕ” ಪ್ರಸನ್ನ ಪೂಜೆ, ರಕ್ತಶ್ವರೀ ಪ್ರತಿಷ್ಠೆ ಕಲಶಾಭಿಷೇಕ, ಬೆಳಗ್ಗೆ ಗಂಟೆ 11.30ಕ್ಕೆ ಶ್ರೀ ದೇವರಿಗೆ ಮಹಾಪೂಜೆ, ಪಲ್ಲಪೂಜೆ. ಮಧ್ಯಾಹ್ನ ಗಂಟೆ 12.00ರಿಂದ ಮಹಾ ಅನ್ನಸಂತರ್ಪಣೆ, ವೈದಿಕ ಮಂತ್ರಾಕ್ಷತೆ ನಡೆಯಲಿದೆ. ಸಂಜೆ ಗಂಟೆ 6.00ಕ್ಕೆ ಶ್ರೀ ದೇವರಿಗೆ ರಂಗಪೂಜೆ. ರಾತ್ರಿ ಗಂಟೆ 7.30ರಿಂದ ಅನ್ನಸಂತರ್ಪಣೆ ನೆರವೇರಲಿರುವುದು. ಮಾ.27ರ ಗುರುವಾರ ಸಂಜೆ 4ರಿಂದ ಭಜನೆ 5.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು,  ಪಡು ಶ್ರೀ ವಿಶ್ವೇಶ್ವರ ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿಯ ಸದಸ್ಯರಿಂದ ಅನೃತ್ಯ ವೈಭವ, ಹಾಸ್ಯ ಪ್ರಹಸನು, ಮಾ.28ರಂದು ಬೆಳಗ್ಗೆ 9ರಿಂದ ಭಜನಾ ಕಾರ್ಯಕ್ರಮ, ಸಂಜೆ .6ರಿಂದ 8ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. 

ಪತ್ರಿಕಾಗೋಷ್ಠಿಯಲ್ಲಿ  ಸುಪ್ರಿತ್ ರೈ, ತಾರನಾಥ ಭಟ್, ಕಿಶೋರ್ ಕುಮಾರ್,  ಸನತ್ ಕುಮಾ‌ರ್, ಮೋಹನ್ ದಾಸ್ ಶೆಟ್ಟಿ  ಮತ್ತು ಗೋಕುಲ್ ದಾಸ್ ಶೆಟ್ಟಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ