ಬೆಳ್ತಂಗಡಿ: ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಮಾರುತಿ ಒಮಿನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಇಂದು ವರದಿಯಾಗಿದೆ.
ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯಿಂದ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.