image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿಜೆಪಿಯ ಆ ನಾಯಕರು ಕೂಡಾ ಕಪ್ಪ ಸ್ವೀಕರಿಸಲು ಬರುತ್ತಾರೆಯೇ ಸಿ ಟಿ ರವಿಯವರೇ : ಆರ್. ಪದ್ಮರಾಜ್ ಪ್ರಶ್ನೆ

ಬಿಜೆಪಿಯ ಆ ನಾಯಕರು ಕೂಡಾ ಕಪ್ಪ ಸ್ವೀಕರಿಸಲು ಬರುತ್ತಾರೆಯೇ ಸಿ ಟಿ ರವಿಯವರೇ : ಆರ್. ಪದ್ಮರಾಜ್ ಪ್ರಶ್ನೆ

ಮಂಗಳೂರು:  ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಧರ್ಮೇಂದ್ರ ಪ್ರದಾನ್‌, ರಾಧಾ ಮೋಹನ್‌ರವರು ಕರ್ನಾಟಕಕ್ಕೆ ಆಗಾಗ್ಗೆ ಬರುತ್ತಿರುತ್ತಾರೆ. ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಯಲು ಅವರು ಬರುತ್ತಿರಬಹುದು. ಆದರೆ ಸಿಟಿಯವರ ಹೇಳಿಕೆ ನೋಡಿದರೆ, ಬಿಜೆಪಿಯ ಆ ನಾಯಕರು ಕೂಡಾ ಕಪ್ಪ ಸ್ವೀಕರಿಸಲು ಬರುತ್ತಾರೆಯೇ ಎಂಬ ಸಂಶಯ ಮೂಡುತ್ತದೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆ‌ರ್. ಪೂಜಾರಿ ಪ್ರಶ್ನಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್‌ನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಸುರ್ಜೇವಾಲರಿಗೆ ಜನರ ಕಷ್ಟ ಅರಿಯುವ ಆಸಕ್ತಿ ಇಲ್ಲ ಎಂಬುದಾಗಿಯೂ ಸಿ.ಟಿ. ರವಿ ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸುರ್ಜೇವಾಲರು ಪಕ್ಷ ಅಧಿಕಾರಕ್ಕೆ ಬರುವಲ್ಲಿ ಹಗಲಿರುಳು ದುಡಿದವರು. ಯುವ ಕಾಂಗ್ರೆಸ್‌ನಿಂದ ಬಂದ ಅವರು, ಪಕ್ಷದ ಚುನಾವಣಾ ಪ್ರಣಾಳಿಕೆಯ ಕಾರ್ಯಕ್ರಮ ಅನುಷ್ಠಾನ ಆಗುತ್ತಿರುವ ಬಗ್ಗೆ ಗಮನ ಹರಿಸುತ್ತಿದ್ದಾರೆ ಎಂದರು.

ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ಬಗ್ಗೆಯೂ ಮಾತನಾಡಿರುವ ಸಿ.ಟಿ. ರವಿಯವರು, ಹಠಾತ್ ಹೃದಯಾಘಾತಕ್ಕೆ ಒಳಗಾಗುತ್ತಿರುವವರ ಬಗ್ಗೆ ಸಂಶೋಧನೆ ನಡೆಸಲಿ ಎಂದು ಹೇಳಿದ್ದಾರೆ. 2021-22ರಲ್ಲಿ ನಾನು ಪಕ್ಷದ ಯಾವುದೇ ಹುದ್ದೆಯಲ್ಲಿರಲಿಲ್ಲ. ಆ ಸಂದರ್ಭ ಹಠಾತ್ ಹೃದಯಾಘಾತಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದೆ. ಆ ಸಂದರ್ಭ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇತ್ತು. 2024ರಲ್ಲಿ ಸಂಸತ್ತಿನಲ್ಲಿಯೂ ಈ ಬಗ್ಗೆ ಚರ್ಚೆಯಾಗಿತ್ತು. ಆ ಸಂದರ್ಭದಲ್ಲಿ ನೀವೇನು ಕತ್ತೆ ಕಾಯುತ್ತಿದ್ದಿರಾ? ಇದಕ್ಕೆ ಕೇಂದ್ರ ಸರಕಾ ಏನಾದರೂ ಪರಿಹಾರ ಕಂಡುಕೊಂಡಿದೆಯೇ ಎಂದು ಸಿಟಿ ರವಿಯನ್ನು ಪದ್ಮರಾಜ್‌ ಪ್ರಶ್ನಿಸಿದರು.

ಪುತ್ತೂರಿನಲ್ಲಿ ಯುವತಿಯೊಬ್ಬರಿಗೆ ಅನ್ಯಾಯವಾಗಿದೆ. ಈ ವಿಷಯದಲ್ಲಿ ರಾಜಕೀಯ ಸರಿಯಲ್ಲ. ಯುವತಿಗೆ ನ್ಯಾಯ ಸಿಗಬೇಕು ಎಂಬುದು ಕಾಂಗ್ರೆಸ್‌ನ ನಿಲುವು. ಈ ವಿಷಯದಲ್ಲಿ ರಾಜಕೀಯ ಮಾಡಲು ಕಾಂಗ್ರೆಸ್‌ಗೆ ಅವಕಾಶವಿದ್ದರೂ ಅಂತಹ ಕೆಲಸ ಮಾಡಿಲ್ಲ. ಬದಲಾಗಿ ಸ್ಥಳೀಯ ಶಾಸಕರು ಯುವತಿಯ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸಿದ್ದರು. ಅದು ಪಕ್ಷದ ಸಾಮಾಜಿಕ ಬದ್ಧತೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪದ್ಮರಾಜ್ ಉತ್ತರಿಸಿದರು.

Category
ಕರಾವಳಿ ತರಂಗಿಣಿ