image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ -ಪತ್ರಿಕೆ ಎನ್ನುವುದು ಸ್ಪರ್ಧಾತ್ಮಕ ಪರೀಕ್ಷೆಯ ಅಡಿಪಾಯ-ಅರಣ್ಯಾಧಿಕಾರಿ ಹಸ್ತಾ ಶೆಟ್ಟಿ

ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ -ಪತ್ರಿಕೆ ಎನ್ನುವುದು ಸ್ಪರ್ಧಾತ್ಮಕ ಪರೀಕ್ಷೆಯ ಅಡಿಪಾಯ-ಅರಣ್ಯಾಧಿಕಾರಿ ಹಸ್ತಾ ಶೆಟ್ಟಿ

ನೂಜಿಬಾಳ್ತಿಲ: ಪತ್ರಿಕೆ ಎನ್ನುವುದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಡಿಪಾಯವಾಗಿದೆ, ಪತ್ರಿಕೆ ಹಾಗೂ ಪುಸ್ತಕಗಳನ್ನೂ ಓದುವುದರಿಂದ ಸಿಗುವ ಜ್ಞಾನ ವಿದ್ಯಾರ್ಥಿಗಳ ಭವಿಷ್ಯ  ರೂಪಿಸಿಕೊಳ್ಳುವಲ್ಲಿ ಪರಿಣಾಮಕಾರಿಯಾಗಿದೆ ಎಂದು ಮಂಗಳೂರು ವೃತ್ತ (ಪರೀಕ್ಷಾರ್ಥಿ) ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಹೇಳಿದರು. 

ಅವರು ಶನಿವಾರ ನೂಜಿಬಾಳ್ತಿಲ ಬೆಥನಿ ಪದವಿಪೂರ್ವ ಕಾಲೇಜಿನಲ್ಲಿ   ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ ಆಗು-ಹೋಗುಗಳನ್ನು ತಿಳಿಸುವ ಜೊತೆಗೆ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಭರಪೂರ ಮಾಹಿತಿಗಳನ್ನು ಒದಗಿಸುತ್ತದೆ. ಪತ್ರಿಕೆಗಳನ್ನು ಮೊಬೈಲ್ ನಲ್ಲಿ ಪತ್ರಿಕೆಗಳನ್ನು ಓದುವ ಬದಲು, ಪತ್ರಿಕೆಗಳನ್ನು ಕೊಂಡು ಓದಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಬರುವ ಮಾಹಿತಿಗಿಂತ , ಪತ್ರಿಕೆ, ಪುಸ್ತಕಗಳ ಓದುವ ಮಾಹಿತಿ ಹೆಚ್ಚಿನ ಜ್ಞಾನವನ್ನು ನೀಡುತ್ತದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ,  ನವೀಕರಣಗೊಂಡ ಗುರುತಿನ  ಚೀಟಿ ವಿತರಿಸಿ ಮಾತನಾಡಿ, ಪತ್ರಿಕೋದ್ಯಮದಲ್ಲಿ ಹಲವಾರು ಅವಕಾಶಗಳಿದೆ. ಮೊಬೈಲ್ ಬಂದ ಬಳಿಕ ವಿದ್ಯಾರ್ಥಿಗಳಿಗೆ ಕಲಿಕೆಯ ಮನಸ್ಸು ಕಡಿಮೆ ಆಗಿದೆ ಎಂದು ಶಿಕ್ಷಕರು ಹೇಳುತ್ತಾರೆ. ಆಗಾಗಿ ಮೊಬೈಲ್ ನಿಂದ ಆದಷ್ಟು ದೂರ ಇದ್ದು ಶಿಕ್ಷಣ, ಕಠಿಣ ಪರಿಶ್ರಮಕ್ಕೆ ಆದ್ಯತೆ ನೀಡಿ. ಉದ್ಯೋಗ ಪಡೆಯಲು ಶ್ರಮ ವಹಿಸಿ ಎಂದರು. ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆಗಳು ಕಡಿಮೆಯಾಗಿದ್ದು,   ವಿದ್ಯಾರ್ಥಿಗಳ ಬಗ್ಗೆ ಹೆತ್ತವರು ಗಮನ ಹರಿಸಿ, ಕಲಿಕೆಗೆ ಪ್ರೇರಣೆ ನೀಡಬೇಕು ಎಂದ ಅವರು    ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಮಾಹಿತಿ, ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ಪ್ರಯೋಜನವಾಗಲಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು  ಅಧ್ಯಕ್ಷ ನಾಗರಾಜ್ ಎನ್.ಕೆ. ಅಧ್ಯಕ್ಷತೆ ವಹಿಸಿದ್ದರು. ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ನಿರ್ದೇಶಕ ಫಾ|ಆ್ಯಂಟನಿ ಒವೈಸಿ, ವಿದ್ಯಾಸಂಸ್ಥೆಯ ಪ್ರಿನ್ಸಿಪಾಲ್  ಜಾರ್ಜ್ ಟಿ.ಎಸ್., ಶಿಕ್ಷಕ - ರಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮಣ ಗೌಡ, ಸಂಘದ ಕಾರ್ಯದರ್ಶಿ ವಿಜಯಕುಮಾರ್ ವೇದಿಕೆಯಲ್ಲಿ  ಉಪಸ್ಥಿತರಿದ್ದರು. ಸ್ಥಾಪಕಾಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊÊಲ ಪ್ರಸ್ತಾವಗೈದು ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕ  ತೋಮಸ್ ಎ.ಕೆ. ವಂದಿಸಿದರು. ನಾಗರಾಜ್ ಎನ್.ಕೆ. ಕಾರ್ಯಕ್ರಮ ನಿರೂಪಿಸಿದರು. ಬಳಿಕ ಹಸ್ತಾ ಶೆಟ್ಟಿಯವರು ವಿದ್ಯಾರ್ಥಿಗಳೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಯ ವಿಚಾರದಲ್ಲಿ ಸಂವಾದ ನಡೆಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ  ಪಿ.ಪಿ.ವರ್ಗೀಸ್, ಬಿಜೆ.ಪಿ. ರಾಜ್ಯ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ  ಅಭಿಲಾಷ್ ಪಿ.ಕೆ., ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ  ಭಾಸ್ಕರ ರೈ ಕಟ್ಟ, ಪುಷ್ಪರಾಜ್ ಬಿ.ಎನ್., ಭಾಸ್ಕರ ರೈ ಕಟ್ಟ , ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ  ಸಿದ್ದಿಕ್ ನೀರಾಜೆ ಮತ್ತಿತರರು ಉಪಸ್ಥಿತರಿದ್ದರು.

ಸನ್ಮಾನ: 

ಕಾರ್ಯಕ್ರಮದಲ್ಲಿ ನೂಜಿಬಾಳ್ತಿಲದ ಹಿರಿಯ ಪತ್ರಿಕಾ ವಿತರಕಾ ಜಯಕುಮಾರ್ ಜೈನ್ ಕಲ್ಲುಗುಡ್ಡೆ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಪತ್ನಿ ಸುರಭಿ ಜತೆಗಿದ್ದರು. ಹರೀಶ್  ಬಾರಿಂಜ ಸನ್ಮಾನ ಪತ್ರ ವಾಚಿಸಿದರು. ಪ್ರಶಾಂತ್ ನೆಲ್ಯಾಡಿ ಅತಿಥಿಗಳನ್ನು ಪರಿಚಯಿಸಿದರು.

Category
ಕರಾವಳಿ ತರಂಗಿಣಿ