image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆ

ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆ

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆ ಬಂಟ್ಸ್ ಹಾಸ್ಟೇಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆಯಿತುಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್‌ ಶೆಟ್ಟಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ವರದಿ ವಾಚಿಸಿದರು. ಕೋಶಾಧಿಕಾರಿ ಉಳ್ಳೂರು ಮೋಹನ ದಾಸ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು. ಬಳಿಕ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ ನೆರವೇರಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ವೈದ್ಯಕೀಯ ಚಿಕಿತ್ಸೆಗೆ, ಮದುವೆಗೆ, ವಿದ್ಯಾಭ್ಯಾಸಕ್ಕೆ ಮನೆ ರಿಪೇರಿಗೆ, ಕ್ರೀಡೆಗೆ, 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹೀಗೆ ಹತ್ತಾರು ಸಮಾಜಮುಖಿ ಕೆಲಸಗಳಿಗೆ ಒಕ್ಕೂಟದಿಂದ ಸುಮಾರು 50 ಲಕ್ಷ ರೂಪಾಯಿಗೂ ಮಿಕ್ಕಿದ ಅನುದಾನವನ್ನು ವಿತರಿಸಲಾಯಿತು. ಕಳೆದ ಏಳು ವರ್ಷಗಳಿಂದ ಒಕ್ಕೂಟದಿಂದ ಈ ವರೆಗೆ 30 ಕೋಟಿ ರೂಪಾಯಿಗೂ ಮಿಕ್ಕಿದ ಅನುದಾನವನ್ನು ವಿತರಿಸಲಾಗಿದೆ ಎಂದು ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ತಿಳಿಸಿದರು. ಮುಖ್ಯ ಅತಿಥಿಯಾಗಿ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್‌ ಭೋಜ ಶೆಟ್ಟಿ, ಮಹಾ ನಿರ್ದೇಶಕರಾದ ಡಾ ಆ‌ರ್ ಕೆ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಸಮಾರಂಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆಯಾಗಿ ಆಯ್ಕೆಯಾದ ಪ್ರತಿಭಾ ಕುಳಾಯಿ ಅವರನ್ನು ಒಕ್ಕೂಟದಿಂದ ಐಕಳ ಹರೀಶ್‌ ಶೆಟ್ಟಿ ಸನ್ಮಾನಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕಾರ್ಯಗಳು ಶ್ಲಾಘನೀಯ. ಒಕ್ಕೂಟದಿಂದ ಸನ್ಮಾನ ಪಡೆಯುತ್ತಿ ರುವುದು ಅತೀವ ಸಂತೋಷವನ್ನುಂಟು ಮಾಡಿದೆ. ಇದು ನನ್ನ ಸಮಾಜಕ್ಕೆ ಮಹಿಳೆಯರಿಗೆ ಮಾಡಿದ ಗೌರವ ಎಂದರು.

ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ಳೂರು ಮೋಹನ್ ದಾಸ್ ಶೆಟ್ಟಿ ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಿಎ ದಯಾಚರಣ್ ಶೆಟ್ಟಿ, ವಕೀಲ ಪೃಥ್ವಿರಾಜ ರೈ ಮಹಾ ನಿರ್ದೇಶಕರಾದ ಡಾ.ಆ‌ರ್ ಕೆ. ಶೆಟ್ಟಿ, ನಿರ್ದೇಶಕರಾದ ಶಶಿಧ‌ರ್ ಶೆಟ್ಟಿ ಇಂನ್ನಜೆ, ಪೋಷಕ ಸದಸ್ಯರುಗಳಾದ ಗಿರೀಶ್ ಶೆಟ್ಟಿ ತೆಳ್ಳಾರ್, ಸತೀಶ್ ವಿ. ಶೆಟ್ಟಿ ಮಾಳ, ಹುಂತ್ರಿಕೆ ಸುಧಾಕ‌ರ್ ಶೆಟ್ಟಿ, ಲೋಕೇಶ್‌ ಶೆಟ್ಟಿ ಕುಳ, ಜಗನ್ನಾಥ್‌ ಚೌಟ, ಅಶೋಕ್ ಕುಮಾ‌ರ್ ಶೆಟ್ಟಿ ಮೈರ್ಮಾಡಿ, ಶ್ರೀಧ‌ರ್ ವಿ.ಶೆಟ್ಟಿ ಆರೂರು, ಅಕ್ಕುಂಜೆ ಸತಿಶ್ಚಂದ್ರ ಶೆಟ್ಟಿ, ಶ್ರೀಮತಿ ಕಲ್ಪನಾ ಕೃಷ್ಣ ಶೆಟ್ಟಿ, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಇವರನ್ನು ಗೌರವಿಸಲಾಯಿತು.

Category
ಕರಾವಳಿ ತರಂಗಿಣಿ