ಮಂಗಳೂರು: ಕೊಂಕಣಿ ಭಾಷಾ ಮಂಡಳ್ ಕರ್ನಾಟಕ(ರಿ) ರಾಜ್ಯದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಕಾರ್ಯದರ್ಶಿಯಾಗಿ ವಕೀಲರಾದ ಲಿಸ್ಟನ್ ಡಿಸೋಜ ಆಯ್ಕೆಯಾಗಿದ್ದಾರೆ.ರೇಮಂಡ್ ಡಿಕೂನಾ ತಾಕೊಡೆ ಹಿರಿಯ ಪತ್ರಕರ್ತರು, ಬಹುಬಾಷಾ ಸಾಹಿತಿಗಳು, ಕೊಂಕಣಿಯ ಪತ್ರಿಕೆಗಳಲ್ಲಿ ಸಹ- ಸಂಪಾದಕ, ಸಂಪಾದಕ ಆಗಿದ್ದವರು ,17 ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲಿ ಪ್ರಕಟಿಸಿದವರು ಕರ್ನಾಟಕದ ಹಿರಿಯ ಕೊಂಕಣಿ ಸಕಲ ಧರ್ಮದ ಕೊಂಕಣಿ ಭಾಷಿಗರ ಸಂಘಟನೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಇಂದಿಲ್ಲಿ ಆಯ್ಕೆಯಾದರು.
ಕಾನೂನು ವ್ಯಾಸಂಗ, ಪತ್ರಿಕಾ ಮಾದ್ಯಮ ಉನ್ನತ ವ್ಯಾಸಂಗ ಮಾಡಿರುವ ರೇಮಂಡ್ ಡಿಕೂನಾ ತಾಕೊಡೆ 1985 ರಿಂದ ಪತ್ರಕರ್ತರು, ಆಗಲೇ ಕೊಂಕಣಿ ಮಾತೃಭಾಷೆಗೆ ಟೊಂಕಕಟ್ಟಿ ರಾಕ್ಣೊದಲ್ಲಿ ಪ್ರಚಾರಕರು ಆಗಿ ಕೆಲಸಮಾಡಿದರು,ನಂತರ ಮಿತ್ರ್ ಕೊಂಕಣಿ ಪತ್ರಿಕೆಯ ಸಹ ಸಂಪಾದಕ ಆಗಿ ಹನ್ನೆರಡು ವರ್ಷಗಳ ಕಾಲ ಉಚಿತವಾಗಿ ಸೇವೆ ನೀಡಿದರು. ಕೆಥೊಲಿಕ್ ಸಭಾದ ಅಮ್ಚೊ ಸಂದೇಶ್ ಪತ್ರಿಕೆಯ ಸಂಪಾದಕ ಆಗಿ ಅದನ್ನು ಲಾಭಕ್ಕೆ ತಂದು ನಂತರ ಕನ್ನಡದ ಜನವಾಹಿಯಲ್ಲಿ ವರದಿಗಾರ ಆದರು. ದೈಜಿವರ್ಲ್ಡ್ ನ ಆರಂಭದಲ್ಲಿ ವರದಿಗಾರ ಆದರು. ನಂತರ ಪಿಂಗಾರ ವಾರ ಪತ್ರಿಕೆ ಆರಂಭಿಸಿದರು. ಕಳೆದ ಇಪ್ಪತ್ತು ವರ್ಷಗಳ ಕಾಲ ಸಂಪಾದಕ ಆಗಿ ಏಕೈಕ ಕ್ರೈಸ್ತರ ಪತ್ರಿಕೆ ನಡೆಸುತ್ತಿದ್ದಾರೆ.ನಾಲ್ಕು ನಾಟಕ, ಹದಿನೇಳು ಪುಸ್ತಕಗಳು ಪ್ರಕಟ ಆಗಿದೆ.
ಎಂಸಿಸಿ ಬ್ಯಾಂಕ್ ಆರ್ಥಿಕ ಕಷ್ಟದಲ್ಲಿ ಇದ್ದಾಗ ಲಾಭಕ್ಕೆ ತರಲು ತಂಡ ಕಟ್ಟಿ ನಿರ್ದೇಶಕಮಂಡಳಿಯ ಸದಸ್ಯರಾಗಿ ಶ್ರಮಿಸಿದರು, ಡೊನ್ ಬಾಸ್ಕೊ ಹಾಲ್ ಪುನರ್ನಿರ್ಮಾಣ ಮಾಡಲು ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ದುಡಿದರು, ಕ್ರಿಸ್ಟೊಫರ್ ಅಸೋಸಿಯೇಷನ್ ಮೆನ್ಸ್ ಹಾಸ್ಟೆಲ್ ಅಧ್ಯಕ್ಷರಾಗಿ ಮೂರು ವರ್ಷಗಳ ಕಾಲ ಇದ್ದು ಕಟ್ಟಡದ ಹೊಸ್ಟೆಲಿನ ಕಾಯಕಲ್ಪ ಮಾಡಿ ನಿವಾಸಿಗಳಿಗೆ ನೆಮ್ಮದಿ ನೀಡಿದರು. ಕೆಥೊಲಿಕ್ ಸಭಾದ ಆರಂಭಕ್ಕೆ ಮೊದಲು ನಡೆದ ಒಪಿತ್ಯಾಗಿ ವಿರುದ್ಧದ ಚಳುವಳಿಯಲ್ಲಿ ವಿದ್ಯಾರ್ಥಿಯಾಗಿ ಸಕ್ರಿಯ ಭಾಗವಹಿದರು.
ಇಂದು ಕೊಂಕಣಿ ಮಾತೃಭಾಷೆಯ ಯೋಗ್ಯ ರಾಜ್ಯ ಮಟ್ಟದ ಅದ್ಯಕ್ಷ ಆಗಿದ್ದಾರೆ. ದಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹಿರಿಯ ಸದಸ್ಯರು
ಇತರ ಪದಾಧಿಕಾರಿಗಳಾಗಿ; ಕಾರ್ಯದರ್ಶಿ ಆಗಿ ವಕೀಲರು ಮತ್ತು ಕೊಂಕಣಿ ನಾಟಕ ಸಭೆಯ ಡೊನ್ ಬೊಸ್ಕೊ ಹೊಲ್ ಪುನರ್ನಿರ್ಮಾಣದ ರೂವಾರಿ ಲಿಸ್ಟನ್ ಡಿಸೋಜ, ಖಜಾಂಚಿ ಆಗಿ ಸ್ಕವ್ಟ್ ಮತ್ತು ಗೈಡ್ ದಕ ಜಿಲ್ಲಾ ಉಪಾಧ್ಯಕ್ಷರು ಮತ್ತು ನಿವೃತ್ತ ಬ್ಯಾಂಕ್ ಯೂನಿಯನ್ ಪದಾಧಿಕಾರಿಗಳು ಆದ ಲಯನ್ ಕೆ ವಸಂತ ರಾವ್, ಉಪಾಧ್ಯಕ್ಷರು ಆಗಿ ಜಿಎಸ್ಬಿ ಮಹಿಳಾ ಮಂಡಳ್ ಇದರ ಸಕ್ರಿಯ ಪದಾದಿಕಾರಿ ಮೀನಾಕ್ಷಿ ಪೈ, ಸಹ ಕಾರ್ಯದರ್ಶಿ ಆಗಿ ಯುವ ಉದ್ಯಮಿ ಪ್ರಸಾದ್ ಶೆಣೈ ಅವಿರೋಧವಾಗಿ ಆಯ್ಕೆಯಾದರು.
ಕೆಬಿಎಂಕೆ ಕಾರ್ಯಕಾರಿಣಿಯ ಅಹ್ವಾನಿತ ಸದಸ್ಯರಾದ ಹಿರಿಯರಾದ ಗೀತಾ ಸಿ ಕಿಣಿ ಚುನಾವಣಾ ಅಧಿಕಾರಿಯಾಗಿ ಆಯ್ಕೆಯನ್ನು ನಡೆಸಿ ಹೊಸ ಪದಾಧಿಕಾಗಳ ಘೋಷಣೆ ಮಾಡಿದರು.
ಕಾರ್ಯಕಾರಿ ಸದಸ್ಯರಾದ ಜೂಲಿಯೆಟ್ ಫೆರ್ನಾಂಡೀಸ್, ಲಾರೆನ್ಸ್ ಪಿಂಟೊ, ಜೊಸ್ಸಿ ಪಿಂಟೊ, ಸುರೇಶ್ ಶೆಣೈ, ಎಡೊಲ್ಫ್ ಡಿಸೋಜ, ಝಿನಾ ಫೆರ್ನಾಂಡೀಸ್, ಅರವಿಂದ್ ಶಾನ್ ಭಾಗ್ ಮತ್ತು ಶಾಂತಿ ವೆರೊನಿಕಾ ಹಾಜರಿದ್ದರು.