image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಮಕೃಷ್ಣ ಮಿಷನ್, ಮಂಗಳೂರುನಿಂದ ಅಮೃತ ಭಕ್ತಿ ಸುಧಾ ಸಂಗೀತ ಕಾರ್ಯಕ್ರಮ

ರಾಮಕೃಷ್ಣ ಮಿಷನ್, ಮಂಗಳೂರುನಿಂದ ಅಮೃತ ಭಕ್ತಿ ಸುಧಾ ಸಂಗೀತ ಕಾರ್ಯಕ್ರಮ

ಮಂಗಳೂರು: ರಾಮಕೃಷ್ಣ ಮಿಷನ್, ಮಂಗಳೂರು ಸಂಸ್ಥೆಯ ಅಮೃತ ವರ್ಷ 75 ವರ್ಷಗಳ ಸಂಭ್ರಮಾಚರಣೆ ಅಂಗವಾಗಿ "ಅಮೃತ ಭಕ್ತಿ ಸುಧಾ" ಎಂಬ ಭಕ್ತಿ ಗಾಯನ ಕಾರ್ಯಕ್ರಮವನ್ನು ಭಾನುವಾರ, 12 ಅಕ್ಟೋಬರ್ 2025ರಂದು ಸಂಜೆ 5.00ರಿಂದ 7.30ರವರೆಗೆ ಸ್ವಾಮಿ ವಿವೇಕಾನಂದ ಸಭಾಭವನ, ರಾಮಕೃಷ್ಣ ಮಠ, ಮಂಗಳೂರಿನಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಖ್ಯಾತ ಗಾಯಕಿ ಕುಮಾರಿ ಮೇಧಾ ವಿದ್ಯಾಭೂಷಣ ಅವರು ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಸಂಗೀತ ಕಾರ್ಯಕ್ರಮದ ಮೊದಲು ಸಂಜೆ 5.00ರಿಂದ 5.30ರವರೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಯಾಗಿ ಶ್ರೀ ಮಂಜುನಾಥ್ ಬಿ. ಸಿಂಗಾಯಿ, ಪ್ರಧಾನ ವ್ಯವಸ್ಥಾಪಕ  ಕೆನರಾ ಬ್ಯಾಂಕ್ ಇವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸ್ವಾಮಿ ಜಿತಕಾಮಾನಂದಜಿ ಅವರು ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಂಜೆಯ ಮುಖ್ಯ ಆಕರ್ಷಣೆಯಾಗಿರುವ ಕುಮಾರಿ ಮೇಧಾ ವಿದ್ಯಾಭೂಷಣ ಅವರ ಭಕ್ತಿಗೀತೆಗಳು ಕಾರ್ಯಕ್ರಮದ ಆಧ್ಯಾತ್ಮಿಕ ವಾತಾವರಣವನ್ನು ಮತ್ತಷ್ಟು ಸುಂದರಗೊಳಿಸಲಿದ್ದು, ಎಲ್ಲಾ ಭಕ್ತರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆಯ ಮೂಲಕ ವಿನಂತಿಸಲಾಗಿದೆ.

Category
ಕರಾವಳಿ ತರಂಗಿಣಿ