image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅ.19ರಂದು ಓಷಿಯನ್ ಪರ್ಲ್ ನಲ್ಲಿ 'ಕುಪ್ಮಾ ಸಮಿತಿ' ಪದಗ್ರಹಣ ಸಮಾರಂಭ

ಅ.19ರಂದು ಓಷಿಯನ್ ಪರ್ಲ್ ನಲ್ಲಿ 'ಕುಪ್ಮಾ ಸಮಿತಿ' ಪದಗ್ರಹಣ ಸಮಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ ಸಮಾರಂಭ ಅ.19 ರಂದು ಬೆಳಗ್ಗೆ 11 ಗಂಟೆಯಿಂದ ನಗರದ ಕೊಡಿಯಾಲಬೈಲ್ ನಲ್ಲಿರುವ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ನಡೆಯಲಿದೆ ಎಂದು ಕುಪ್ಮಾ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು.  ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ವಿಧಾನ ಪರಿಷತ್‌ ಸದಸ್ಯ ಭೋಜೆ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ರಾಜೇಶ್ವರಿ ಎಚ್‌.ಎಚ್‌, ರಾಜ್ಯ ಕುಷ್ಮಾಸಮಿತಿಯ ಗೌರವಾಧ್ಯಕ್ಷರಾದ ಕೆ. ರಾಧಾಕೃಷ್ಣ ಶೆಣೈ, ಡಾ. ಎಂ.ಬಿ. ಪುರಾಣಿಕ್, ಡಾ. ಕೆ.ಸಿ. ನಾಯ್ಕ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಭಾಗವಹಿಸಲಿ ದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕುಪ್ಮಾ ಕಾರ್ಯದರ್ಶಿ ಡಾ. ಮಂಜುನಾಥ್ ಎಸ್‌. ರೇವಣ್ಕಾರ್, ಉಪಾಧ್ಯಕ್ಷ ರವೀಂದ್ರ ಪಿ, ಖಚಾಂಚಿ ರಮೇಶ್ ಕೆ, ಸಂಯೋಜಕ ಕರುಣಾಕರ ಬಳ್ಳೂರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ