ಮಂಗಳೂರು: ಭಾರತದಲ್ಲಿ ಹಡಗು ನಿರ್ಮಾಣಗಳ ಕ್ಲಸ್ಟರ್ ಗಳನ್ನು ನಿರ್ಮಿಸುವ ಮೂಲಕ ಹಡಗು ನಿರ್ಮಾಣದಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸರಕಾರದ ಬಂದರು ನೌಕಯಾನ ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನಾವಾಲ್ ತಿಳಿಸಿದ್ದಾರೆ.
ಅವರು ಇಂದು ನವಮಂಗಳೂರು ಬಂದರು ಪ್ರಾಧಿಕಾರದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಚೈನಾ,ಕೊರಿಯಾ,ಜಪಾನ್ ನಂತಹ ದೇಶಗಳು ಹಡಗು ತಯಾರಿಕೆಯಲ್ಲಿ ವಿಶ್ವದ ಅಗ್ರ ರಾಷ್ಟ್ರಗಳಾಗಿವೆ.ಮುಂದಿನ ದಿನಗಳಲ್ಲಿ ಭಾರತದ ಒರಿಸ್ಸಾ,ಗುಜರಾತ್, ತಮಿಳು ನಾಡು ಹಡಗು ನಿರ್ಮಾಣದಲ್ಲಿ ಸ್ವಾಯತ್ತ ತೆಯನ್ನು ಸಾಧಿಸಲು ಕ್ಲಸ್ಟರ್ ಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವ ಸರ್ಬಾನಂದ ಸೋನಾವಾಲ್ ತಿಳಿಸಿದ್ದಾರೆ.
ನವಮಂಗಳೂರು ಬಂದರನ್ನಾಗಿ ಅಭಿವೃದ್ಧಿ ಪಡಿಸಿ,ನೌಕಾ ಯಾನದ ಪ್ರವಾಸೋ ದ್ಯಮ,ಕೈಗಾರಿಕಾ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಜೊತೆಗೆ ಆರ್ಥಿಕ ಸಂಪನ್ಮೂಲ ವೃದ್ಧಿ ಗೆ ಆಧ್ಯತೆ ನೀಡಲಾಗುವುದು.ಮಂಗಳೂರು ಬಂದರಿನಲ್ಲಿ ಸರಕು ನಿರ್ವಹಣೆಗೆ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಸೋಲಾರ್ ಶಕ್ತಿ,ಇಂಧನ ಕ್ಷಮತೆ ಸೇರಿದಂತೆ ಗ್ರೀನ್ ಪೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಕಳೆದ 50ವರ್ಷಗಳಲ್ಲಿ ನವಮಂಗಳೂರು ಬಂದರು ಕರ್ನಾಟಕ ಸರಕಾರ ಹಾಗೂ ಕೇಂದ್ರ ಸರಕಾರ ಜಿಲ್ಲೆಯ ಜನತೆಯ ಸಹಕಾರದಿಂದ ಬೆಳೆದು ದೇಶಕ್ಕೆ ಕೊಡುಗೆ ನೀಡುತ್ತಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ,ನವ ಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ. ಅಕ್ಕರಾಜು ವೆಂಕಟರಮಣ ಮೊದಲಾದ ವರು ಉಪಸ್ಥಿತರಿದ್ದರು.