image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಹಕಾರಿ ವಲಯದಲ್ಲಿ ದಕ್ಷಿಣ ಕನ್ನಡದ ಬ್ಯಾಂಕ್ ದೇಶಕ್ಕೇ ಮಾದರಿ – ಮಾಜಿ ಸಿಎಂ ವೀರಪ್ಪ ಮೊಯಿಲಿ ಗುಣಗಾನ

ಸಹಕಾರಿ ವಲಯದಲ್ಲಿ ದಕ್ಷಿಣ ಕನ್ನಡದ ಬ್ಯಾಂಕ್ ದೇಶಕ್ಕೇ ಮಾದರಿ – ಮಾಜಿ ಸಿಎಂ ವೀರಪ್ಪ ಮೊಯಿಲಿ ಗುಣಗಾನ

ಮಂಗಳೂರು:ದೇಶದ ಸಹಕಾರಿ ವಲಯದಲ್ಲಿ ಅಭೂತಪೂರ್ವ ಕ್ರಾಂತಿ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ರಾಷ್ಟ್ರಮಟ್ಟದಲ್ಲಿ ಅಗ್ರಸ್ಥಾನಕ್ಕೇರುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಬ್ಯಾಂಕ್‌ನ ಈ ಸಾಧನೆಯು ದೇಶದ ಇತರ ಸಹಕಾರಿ ಸಂಸ್ಥೆಗಳಿಗೆ ದಾರಿದೀಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಶ್ಲಾಘಿಸಿದ್ದಾರೆ. ಅವರು ಡಾ. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬ ಪ್ರಯುಕ್ತ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿ,

ಸುಮಾರು 33 ವರ್ಷಗಳ ಹಿಂದೆ ಕೇವಲ 65 ಕೋಟಿ ರೂಪಾಯಿಗಳ ಠೇವಣಿಯೊಂದಿಗೆ ಆರಂಭವಾದ ಈ ಬ್ಯಾಂಕ್, ಇಂದು ಬರೋಬ್ಬರಿ 8,000 ಕೋಟಿ ರೂಪಾಯಿಗಳ ವಹಿವಾಟು ನಡೆಸುವ ಹಂತಕ್ಕೆ ಬೆಳೆದು ನಿಂತಿದೆ.  ಬ್ಯಾಂಕ್‌ನ ಈ ಬೆಳವಣಿಗೆಗೆ ಭದ್ರ ಬುನಾದಿ ಹಾಕಿಕೊಟ್ಟಿದೆ ಎಂದು  ಡಾ. ರಾಜೇಂದ್ರ ಕುಮಾರ್ ಮಾತನಾಡಿ, ನಬಾರ್ಡ್ (NABARD) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ದೇಶದಲ್ಲಿರುವ ಒಟ್ಟು 459 ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳ ಪೈಕಿ ದಕ್ಷಿಣ ಕನ್ನಡದ ಈ ಬ್ಯಾಂಕ್ ಪ್ರಥಮ ಸ್ಥಾನವನ್ನು ಅಲಂಕರಿಸಿದೆ. ವಾಣಿಜ್ಯ ಬ್ಯಾಂಕ್‌ಗಳು ಸಾಮಾನ್ಯ ಜನರ ಸಾಲದ ಅಗತ್ಯಗಳಿಗೆ ಸ್ಪಂದಿಸಲು ವಿಳಂಬ ಮಾಡುತ್ತಿರುವ ಈ ಕಾಲದಲ್ಲಿ, ಕೇವಲ 30 ನಿಮಿಷಗಳಲ್ಲಿ ಸಾಲ ಮಂಜೂರು ಮಾಡುವ ಮೂಲಕ ಈ ಬ್ಯಾಂಕ್ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ನವೋದಯ ಸ್ವಸಹಾಯ ಗುಂಪುಗಳ ಮೂಲಕ ಲಕ್ಷಾಂತರ ಮಹಿಳೆಯರು ಇಂದು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರೆ. ಮಹಿಳಾ ಗುಂಪುಗಳಿಗೆ ನೀಡಲಾದ ಸಾಲದ ಮರುಪಾವತಿ ಪ್ರಮಾಣವು ಶೇ. 98.5 ರಷ್ಟಿರುವುದು ಈ ಯೋಜನೆಯ ಯಶಸ್ಸಿಗೆ ಸಾಕ್ಷಿಯಾಗಿದೆ. ಇದು ಬ್ಯಾಂಕ್‌ನ ಮೇಲಿರುವ ಜನರ ವಿಶ್ವಾಸವನ್ನು ಎತ್ತಿ ತೋರಿಸುತ್ತದೆ  ಎಂದರು

Category
ಕರಾವಳಿ ತರಂಗಿಣಿ