image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರ ಪ್ರಾರಂಭ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರ ಪ್ರಾರಂಭ

ಮಂಗಳೂರು: ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿʼಸೋಜಾರವರ ಮಂಗಳೂರು ಮಹಾನಗರ ಪಾಲಿಕೆಯ ತಮ್ಮ ಶಾಸಕರ ಕಛೇರಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರವನ್ನು (SIR) ದಿನಾಂಕ 15-06-2026 ರಂದು ಪ್ರಾರಂಭಿಸಲಾಯಿತು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ತಪ್ಪಿಸಿಕೊಳ್ಳದಂತೆ ತಡೆಯಲು ಮತ್ತು ಸರಿಯಾದ ದಾಖಲೆಗಳನ್ನು ಸರಿಯಾದ ಸಮಯದಲ್ಲಿ ನೀಡಿ ಖಾತ್ರಿ ಪಡಿಸಿಕೊಳ್ಳಲು ಈ ಸಹಾಯವಾಣಿ ಕೇಂದ್ರವು ಸಹಕಾರಿಯಾಗಲಿದೆ. ಸಾರ್ವಜನಿಕರು ಮೊಬೈಲ್‌ ಸಂಖ್ಯೆ: 8217865120 ಅನ್ನು ಸಂಪರ್ಕಿಸಿದಲ್ಲಿ ಸಂಪೂರ್ಣ ಮಾಹಿತಿಯೊಂದಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಲು ಸಹಾಯ ಮಾಡಲಾಗುವುದು ಎಂದು ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿʼಸೋಜಾ ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ ಅವರು, ಅನೇಕ ಕಡೆಗಳಲ್ಲಿ ಸಾರ್ವಜನಿಕರಿಗೆ 'SIR' ಬಗ್ಗೆ ಮಾಹಿತಿಯ ಕೊರತೆ ಇದ್ದು, ಈ ರೀತಿಯ ಸಹಾಯ ಕೇಂದ್ರದ ಮೂಲಕ ಮಾಹಿತಿ ನೀಡಿದಲ್ಲಿ ಜನರ ಗೊಂದಲಗಳು ದೂರವಾಗಲಿವೆ ಎಂದರು. ಮಹತ್ತರವಾದ ಈ ಸಹಾಯಕೇಂದ್ರದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಕರೆ ನೀಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ, ಭಾಸ್ಕರ್‌ ಮೊಯಿಲಿ, ನವೀನ್‌ ಡಿʼಸೋಜಾ, ಪದ್ಮನಾಭ ಪಣಿಕ್ಕರ್‌, ಪ್ರಕಾಶ್‌ ಬಿ ಸಾಲ್ಯಾನ್‌, ಸತೀಶ್‌ ಪೆಂಗಲ್‌, ಅಬ್ದುಲ್‌ ಸಲೀಂ, ಚೇತನ್‌ ಕುಮಾರ್‌, ಮನಿಷ್‌ ಬೋಳಾರ್‌, ಬಶೀರ್‌ ಅಹಮಮದ್‌ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ